ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್


ಆಂಧ್ರಪ್ರದೇಶ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ನ್ಯಾಯಪೀಠ

ಪರಿಶಿಷ್ಟ ಜಾತಿ ಸ್ಥಾನಮಾನದ ಕುರಿತು ಸುಪ್ರೀಂ ಕೋರ್ಟ್‌ (Supreme Court) ಇಂದು (ಮಂಗಳವಾರ) ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಹಿಂದೂ, ಸಿಖ್‌, ಬೌದ್ಧ ಧರ್ಮ ಹೊರತುಪಡಿಸಿ ಬೇರೆ ಧರ್ಮಗಳಿಗೆ ಮತಾಂತರಗೊಂಡವರು (Conversion) ಪರಿಶಿಷ್ಟ ಜಾತಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆಂಧ್ರಪ್ರದೇಶ ಹೈಕೋರ್ಟ್ (Andhra Pradesh High Court) 2025ರ ಮೇ ತಿಂಗಳಲ್ಲಿ ನೀಡಿದ್ದ ತೀರ್ಪನ್ನ ಪ್ರಶ್ನಿಸಿ ಪಾದ್ರಿ ಒನ್ ಚಿಂತದ ಆನಂದ್‌ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಕೆ ಮಿಶ್ರಾ ಮತ್ತು ಮನಮೋಹನ್‌ ಅವರಿದ್ದ ದ್ವಿಸದಸ್ಯ ಪೀಠವು ಈ ತೀರ್ಪು ಪ್ರಕಟಿಸಿದೆ. ಬೇರೆ ಧರ್ಮವನ್ನ ಪ್ರತಿಪಾದಿಸುವ ಯಾರನ್ನೂ ಪರಿಶಿಷ್ಟ ಜಾತಿ (Scheduled Caste) ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

Leave a Reply

Your email address will not be published.