ಕೆಡಿ ಸಿನಿಮಾದ ವಿವಾದಿತ `ಸರ್ಸೆ ಸೆರಗ ಸರ್ಸೆ’ ಹಾಡಿಗೆ ನೃತ್ಯ ಮಾಡಿದ್ದಕ್ಕೆ ನೋರಾ ಫತೇಹಿ ವಿರುದ್ಧ ಇಸ್ಲಾಂ ಧರ್ಮದ ಮುಖಂಡರು ಫತ್ವಾ ಹೊರಡಿಸಿದ್ದಾರೆ. ಉತ್ತರ ಪ್ರದೇಶದ ಆಲಿಗಢದ ಮುಸ್ಲಿಂ ದಾರುಲ್ ಇಫ್ತಾದಿಂದ ಮುಖಂಡರು `ಸರ್ಸೆ ಸೆರಗ ಸರ್ಸೆ’ ನೃತ್ಯ ಮಾಡಿದ್ದಕ್ಕೆ ನೋರಾ ಫತೇಹಿ ವಿರುದ್ಧ ಫತ್ವಾ ಜಾರಿ ಮಾಡಿದ್ದಾರೆ. ಈ ಹಾಡು ಆಕ್ಷೇಪಾರ್ಹವಾಗಿದ್ದು, ಇಸ್ಲಾಮಿಕ್ ಬೋಧನೆಗಳಿಗೆ ವಿರುದ್ಧವೆಂದು ಪರಿಗಣಿಸುವ ವಿಷಯಗಳನ್ನು ಹೊಂದಿದೆ. ಹೀಗಾಗಿ ಈ ಹಾಡಿಗೆ ನೃತ್ಯ ಮಾಡಿದ್ದಕ್ಕಾಗಿ ಫತ್ವಾ ಜಾರಿ ಮಾಡಿದೆ. ನಟಿ ನೋರಾ ಫತೇಹಿ...
Author: Leader Judgement (Leader Judgement)
ಉದ್ಯೋಗ ನೇಮಕಾತಿಗೂ AI ಸಂಕಷ್ಟ
ಇಂದಿನ ತಂತ್ರಜ್ಞಾನದ ಯುಗದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಎಐ (AI) ಅಂದರೆ ಕೃತಕ ಬುದ್ಧಿಮತ್ತೆ ಕಂಟಕ ತರಬಹುದು ಎಂಬ ಆತಂಕದ ಜೊತೆಗೆ ಉದ್ಯೋಗಿಗಳ ಕೆಲಸವನ್ನೂ ಕಸಿದುಕೊಳ್ಳಬಹುದೆಂಬ ಭಯ ಈಗಾಗಲೇ ಸೃಷ್ಟಿಯಾಗಿದೆ. ಇದರ ಜೊತೆಗೆ ಎಐನಿಂದ ನೇಮಕಾತಿ ಪ್ರಕ್ರಿಯೆಯೂ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂಬ ಅಭಿಪ್ರಾಯಗಳು ಹರಿದಾಡಿದ್ದು, ಈ ಬಗ್ಗೆ ಬೆಂಗಳೂರು ಮೂಲದ ಟೇಕ್ ಯು ಫಾರ್ವರ್ಡ್ ಸಂಸ್ಥೆಯ ಸಂಸ್ಥಾಪಕ ರಾಜ್ ವಿಕ್ರಮಾದಿತ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಯೂಸರ್ ಎಕ್ಸ್ಪೀರಿಯನ್ಸ್ ಹುದ್ದೆಗೆ ನಡೆದ ನೇಮಕಾತಿ ಪ್ರಕ್ರಿಯೆಯನ್ನು...
KGF ನಂತಹ ಅದ್ಭುತ ಸ್ಕ್ರಿಪ್ಟ್ಗಾಗಿ ಕಾಯುತ್ತಿದ್ದೇನೆ: ಕೊರಿಯನ್ ಸ್ಟಾರ್
ಇತ್ತೀಚೆಗೆ ಭಾರತೀಯ ಚಿತ್ರರಂಗವನ್ನು ಉದ್ದೇಶಿಸಿ ಮಾತನಾಡಿದ ಕೊರಿಯನ್ ಸ್ಟಾರ್ ನಟ ವೈ ಹಾ ಜೂನ್, ಯಶ್ ಮತ್ತು ಕೆಜಿಎಫ್ ಗುಣಗಾನ ಮಾಡಿದ್ದಾರೆ. ‘ಅಣ್ತಮ್ಮಾ, ಇಲ್ಲಿ ಯಾರೂ ಹೀರೋಗಳನ್ನು ಹುಟ್ಟಾಕಲ್ಲ, ನಮಗೆ ನಾವೇ ಹೀರೋ ಆಗಬೇಕು’ ಅಂತಾ ರಾಜಾಹುಲಿ ಸಿನಿಮಾದಲ್ಲಿ ಡೈಲಾಗ್ ಹೊಡೆದಿದ್ದ ಯಶ್ ಅವರೀಗ ಕೇವಲ ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್ ಮಾತ್ರವಲ್ಲ, ಇಂಟರ್ನ್ಯಾಷನಲ್ ಸೂಪರ್ ಸ್ಟಾರ್. ಏಕೆಂದರೆ, ಯಶ್ ಮತ್ತು ಕೆಜಿಎಫ್ ಪ್ಯಾನ್ ವರ್ಲ್ಡ್ ಲೆವೆಲ್ನಲ್ಲಿ ಸದ್ದಾದ ಹೆಸರುಗಳು. ಪ್ರೇಕ್ಷಕರು ಮಾತ್ರವಲ್ಲದೇ ಈಗಾಗಲೇ ಭಾರತೀಯ ಸಿನಿಮಾ ದಿಗ್ಗಜರಿಂದಲೂ...
ಏ. ೨ರಂದು ಹನುಮ ಜನ್ಮೋತ್ಸವ
-ಗುರುರಾಜ ಮ. ದೇಶಕುಲಕರ್ಣಿ ಅಚಲ ಭಕ್ತಿ, ಶಕ್ತಿಗೆ ಹೆಸರು ಹನುಮಂತ ರಾಮನ ಮೇಲಿಟ್ಟ ಭಕ್ತಿ, ಲಂಕೆಗೆ ಏಕಾಂಗಿಯ ಹೋಗಿ ಲಂಕಾದಹನ ಮಾಡಿದ ಪರಾಕ್ರಮಿ, ಗಟ್ಟಿ ಮುಟ್ಟಾದ ದೇಹವನ್ನು ಹೊಂದಿರುವ ಆಂಜನೇಯನ ಜನ್ಮವನ್ನು ಸ್ಮರಿಸಲು ಆಚರಿಸಲಾಗುವ ಹಬ್ಬವೇ ಹನುಮ ಜನ್ಮೋತ್ಸವ. ಹನುಮಂತನ ಜನನ: ಒಂದು ದಿನ ಪಾರ್ವತಿ, ಪರಮೇಶ್ವರರು ಕೈಲಾಸ ಪರ್ವತದಲ್ಲಿದ್ದಾಗ ಒಂದು ವಾನರಯುಗ್ಮವನ್ನು ಕಂಡರು. ಪಾರ್ವತಿ ಶಿವನೊಂದಿಗೆ ಕಲೆತು ಗರ್ಭವನ್ನು ಧರಿಸಿ ಅದನ್ನು ತಾಳಲಾರದೇ ಶಿವನಲ್ಲಿ ಮನವಿ ಮಾಡಿದಾಗ ಶಿವ ಆ ಗರ್ಭವನ್ನು ಪಾರ್ವತಿಯ ನಾಭಿಯಿಂದ ಹೊರಬೀಳುವಂತೆ...
ಜಗತ್ತಿನಾದ್ಯಂತ ಬಳಕೆಯಲ್ಲಿರುವ ವಿವಿಧ ಕ್ಯಾಲೆಂಡರ್ಗಳು
ಕ್ಯಾಲೆಂಡರ್ಗಳು ಕೇವಲ ದಿನಾಂಕ ಪಟ್ಟಿಗಳಲ್ಲ; ಅವು ಧರ್ಮ, ನಂಬಿಕೆಗಳು, ಹಬ್ಬಗಳು ಮತ್ತು ಸೂರ್ಯ-ಚಂದ್ರರ ಚಲನೆಯನ್ನು ಆಧರಿಸಿದ ವಿಜ್ಞಾನದ ಪ್ರತಿಬಿಂಬಗಳಾಗಿವೆ. ಜಗತ್ತಿನ ೪೦ಕ್ಕೂ ಹೆಚ್ಚು ಕ್ಯಾಲೆಂಡರ್ಗಳಲ್ಲಿ ೧೧ ಪ್ರಮುಖವಾಗಿವೆ. ಹಿಂದೂ ಪಂಚಾoಗ, ಗ್ರೆಗೋರಿಯನ್, ಹಿಜ್ರಿ, ಚೈನೀಸ್, ಹೀಬ್ರೂ ಮತ್ತು ಬೌದ್ಧ ಕ್ಯಾಲೆಂಡರ್ಗಳು ವಿಭಿನ್ನವಾಗಿ ಕಾಲವನ್ನು ಅಳೆಯುವ ವಿಧಾನಗಳನ್ನು ಹೊಂದಿದೆ. ಕ್ಯಾಲೆಂಡರ್ಗಳು ಕೇವಲ ದಿನ, ತಿಂಗಳು ಮತ್ತು ವರ್ಷವನ್ನು ತಿಳಿಸುವ ಸಾಧನಗಳಲ್ಲ; ಅವು ಆಯಾ ಧರ್ಮದ ನಂಬಿಕೆಗಳು, ಹಬ್ಬಗಳು, ಶುಭ-ಅಶುಭ ಮುಹೂರ್ತಗಳು ಮತ್ತು ಸೂರ್ಯ-ಚಂದ್ರರ ಚಲನೆಯನ್ನು ಆಧರಿಸಿದ ವಿಜ್ಞಾನದ ಪ್ರತಿಬಿಂಬಗಳಾಗಿವೆ....
ಆರ್ಸಿಬಿ Team ಗೆ ವಿರಾಟ್ ವಾರ್ನಿಂಗ್
ಐಪಿಎಲ್ ೨೦೨೬ ಸೀಸನ್ ಆರಂಭಕ್ಕೂ ಮುನ್ನವೇ ಆರ್ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (ತಂಡದ ಆಟಗಾರರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ತಂಡದ ತರಬೇತಿ ಶಿಬಿರದಲ್ಲಿ ಮಾತನಾಡಿದ ಕೊಹ್ಲಿ, ಈ ಸೀಸನ್ ಇನ್ನಷ್ಟು ಕಠಿಣವಾಗಲಿದೆ ಎಂದು ತಿಳಿಸಿದ್ದಾರೆ. ಮಾರ್ಚ್ ೨೮ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ೨೦೨೬ ಆರಂಭವಾಗಲಿದ್ದು, ಆರ್ಸಿಬಿ ಮೊದಲ ಪಂದ್ಯವನ್ನು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಹಿನ್ನೆಲೆ ಈಗಾಗಲೇ ತಂಡ ತಯಾರಿ ಆರಂಭಿಸಿದ್ದು, ಕೊಹ್ಲಿಯ ಭರ್ಜರಿ ಬ್ಯಾಟಿಂಗ್ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ....
ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ;
ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ ಕರಾವಳಿ ಆರ್ಥಕತೆ ಜೀವಾಳವೇ ಮೀನುಗಾರಿಕೆ. ಮಧ್ಯಪ್ರಾಚ್ಯದ ಯುದ್ಧದ ಬಿಸಿ ಮೀನುಗಾರಿಕೆಗೂ (fishing) ತಟ್ಟಿದೆ. ಕರಾವಳಿಯಲ್ಲಿ ಮೀನುಗಾರಿಕೆಗೆ ದೊಡ್ಡ ಸಂಕಷ್ಟ ಎದುರಾಗಿದೆ. ಡೀಸೆಲ್ ಕೊರತೆಯಿಂದಾಗಿ ಆಳ ಸಮುದ್ರ ಮೀನುಗಾರಿಕೆ ತೀವ್ರ ಆತಂಕಕ್ಕೆ ಒಳಗಾಗಿದೆ. ಪ್ರತಿದಿನ ಲಕ್ಷಾಂತರ ಲೀಟರ್ ಡೀಸೆಲ್ ಅವಲಂಬಿಸಿರುವ ಮೀನುಗಾರರು ಈಗ ಸಂಕಷ್ಟದ ಅಂಚಿನಲ್ಲಿದ್ದಾರೆ. ಕರಾವಳಿಯ ಆಳ ಸಮುದ್ರ ಮೀನುಗಾರಿಕೆ ಸಂಪೂರ್ಣವಾಗಿ ಡೀಸೆಲ್ ಪೂರೈಕೆಯನ್ನು ಅವಲಂಬಿಸಿದೆ. ಉಡುಪಿ-ಮಂಗಳೂರು ಭಾಗದಲ್ಲಿ ಪ್ರತಿದಿನ ೧೦ ರಿಂದ ೧೨ ಲಕ್ಷ ಲೀಟರ್ ಡೀಸೆಲ್...
ವಿಶ್ವದ ಅತಿದೊಡ್ಡ LNG ಘಟಕದುರಸ್ತಿಗೆ ೫ ವರ್ಷಬೇಕು!
ಇರಾನ್ ಕ್ಷಿಪಣಿ ದಾಳಿಯಿಂದ ಹಾನಿಗೆ ಒಳಗಾಗಿರುವ ಕತಾರ್ನ ರಾಸ್ ಲಫಾನ್ ಘಟಕ ದುರಸ್ತಿಯಾಗಲು ೩ ರಿಂದ ೫ ವರ್ಷ ತಗಲುವ ಸಾಧ್ಯತೆಯಿದೆ. ಕತಾರ್ನ ಉತ್ತರ ದೋಹಾದಿಂದ ೮೦ ಕಿ.ಮೀ. ದೂರದ ರಾಸ್ ಲಫಾನ್ ಕೈಗಾರಿಕಾ ನಗರದಲ್ಲಿದ್ದ ಎಲ್ಎನ್ಜಿ ಘಟಕದ ಮೇಲೆ ಇರಾನ್ ಮಾರ್ಚ್ ೧೮, ೧೯ರಂದು ೨ ದಿನ ಬ್ಯಾಕ್ ಟು ಬ್ಯಾಕ್ ಮಿಸೈಲ್ ಅಟ್ಯಾಕ್ ಮಾಡಿದೆ. ಇದರಿಂದಾಗಿ ಆ ಪ್ರದೇಶದಲ್ಲಿ ಎಲ್ಎನ್ಜಿ (LNG) ಉತ್ಪಾದನೆ ಸ್ಥಗಿತವಾಗಿದ್ದು, ಜಾಗತಿಕ ಇಂಧನ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಆಗಿದೆ. ಎಲ್ಎನ್ಜಿ...
ಮಧ್ಯಪ್ರಾಚ್ಯ ಸಂಘರ್ಷ: ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ
ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇತ್ತೀಚಿನ ಯುದ್ಧ ಪರಿಸ್ಥಿತಿ ಮತ್ತು ಉದ್ವಿಗ್ನತೆ ಜಾಗತಿಕ ವಿಮಾನಯಾನ ಮತ್ತು ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಹಲವಾರು ದೇಶಗಳ ವಾಯುಪ್ರದೇಶಗಳಲ್ಲಿ ನಿರ್ಬಂಧಗಳು, ವಿಮಾನ ಮಾರ್ಗ ಬದಲಾವಣೆಗಳು ಹಾಗೂ ಅಚಾನಕ್ ವಿಮಾನ ರದ್ಧತಿಗಳು ಹೆಚ್ಚುತ್ತಿರುವುದರಿಂದ ಜಾಗತಿಕ ವಿಮಾನ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಇದರ ಪರಿಣಾಮವಾಗಿ ಯುರೋಪ್, ಏಷ್ಯಾ ಮತ್ತು ಆಫ್ರಿಕಾ ನಡುವಿನ ಹಲವಾರು ವಿಮಾನ ಮಾರ್ಗಗಳಲ್ಲಿ ಪ್ರಯಾಣದ ವೆಚ್ಚವೂ ಗಣನೀಯವಾಗಿ ಏರಿಕೆಯಾಗಿದೆ. ಭಾರತದ ದೃಷ್ಟಿಯಿಂದ ಈ ಪರಿಸ್ಥಿತಿ ವಿಶೇಷವಾಗಿ ಗಂಭೀರವಾಗಿದೆ. ಭಾರತದಿಂದ ವಿಶ್ವದ...
ಹಾರ್ಮುಜ್ ಜಲಸಂಧಿ ಏಕೆ ಮುಖ್ಯ?
ಇದರಿಂದಾಗಿ ಕೇವಲ ಹಾರ್ಮುಜ್ ಜಲಸಂಧಿಗಳು ಮಾತ್ರ ಮುಚ್ಚಿಲ್ಲ. ಈ ಪ್ರದೇಶದ ಪ್ರಮುಖ ರಸಗೊಬ್ಬರ ಉತ್ಪಾದನಾ ಘಟಕಗಳು ಉತ್ಪಾದನೆಯನ್ನು ಸ್ಥಗಿತಗೊಳಿಸಿವೆ. ವಿಶೇಷವಾಗಿ ಉತ್ತರ ದೇಶಗಳಲ್ಲಿನ ರೈತರು ತಮ್ಮ ಬೆಳೆಗಳನ್ನು ಬಿತ್ತಲು ಸಿದ್ಧರಾಗುತ್ತಿರುವ ಸಮಯದಲ್ಲಿ ಈ ಅಡಚಣೆ ಉಂಟಾಗಿದೆ. ಕತಾರ್ನಲ್ಲಿ ’ಕತಾರ್ ಎನರ್ಜಿ’ ನಡೆಸುತ್ತಿರುವ ವಿಶ್ವದ ಅತಿದೊಡ್ಡ ಏಕತಾಣ ಯೂರಿಯಾ ಸ್ಥಾವರವು ನೈಸರ್ಗಿಕ ಅನಿಲದ ಕೊರತೆಯಿಂದಾಗಿ ಉತ್ಪಾದನೆ ಸ್ಥಗಿತಗೊಳಿಸಿದೆ. ಈ ಪ್ರದೇಶದಲ್ಲಿನ ಅನೇಕ ನೈಸರ್ಗಿಕ ಅನಿಲ ಅಥವಾ ಎಲ್ಎನ್ಜಿ ಸ್ಥಾವರಗಳು ಸಹ ಹಾನಿಗೊಂಡಿದ್ದು, ಇದು ತೈಲ ಮತ್ತು ಅನಿಲ ಆರ್ಥಿಕತೆಯ...









