Home Leader Judgement

Author: Leader Judgement (Leader Judgement)

Post
ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ ಕಿಮ್

ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ ಕಿಮ್

ಮಧ್ಯಪ್ರಾಚ್ಯ ಯುದ್ಧದ ನಡುವೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ (kim jong un) ಇದೀಗ ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ್ದಾರೆ. ಹೌದು, ಇತ್ತೀಚಿಗಷ್ಟೇ ಪುತ್ರಿ ಜೊತೆ ಕ್ರೂಸ್ ಕ್ಷಿಪಣಿ ಪರೀಕ್ಷಿಸಿ, ಶೂಟಿಂಗ್ ಮಾಡಿದ್ದರು. ಇದೀಗ ಮತ್ತೆ ಹೊಸ ಪ್ರಯತ್ನ ಮಾಡಿದ್ದಾರೆ. ಪ್ಯೊಂಗ್ಯಾಂಗ್ ನಲ್ಲಿರುವ ೬೦ನೇ ತರಬೇತಿ ನೆಲೆಗೆ ಭೇಟಿ ನೀಡಿದಾಗ ಕಿಮ್ ಮತ್ತು ಜು ಏ ಸಮರಾಭ್ಯಾಸ ವೀಕ್ಷಿಸಿ, ಒಂದೇ ತರಹದ ಉಡುಗೆ ಧರಿಸಿ, ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ್ದಾರೆ. ಈ...

Post
ದೇಶದಾದ್ಯಂತ ೩೨ ವಿಶ್ವವಿದ್ಯಾಲಯಗಳು ನಕಲಿ: ಕರ್ನಾಟಕದಲ್ಲೂ ೨ ಫೇಕ್ ಯೂನಿವರ್ಸಿಟಿ ಪತ್ತೆ!

ದೇಶದಾದ್ಯಂತ ೩೨ ವಿಶ್ವವಿದ್ಯಾಲಯಗಳು ನಕಲಿ: ಕರ್ನಾಟಕದಲ್ಲೂ ೨ ಫೇಕ್ ಯೂನಿವರ್ಸಿಟಿ ಪತ್ತೆ!

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ೧೨ ರಾಜ್ಯಗಳಲ್ಲಿ ಬರೋಬ್ಬರಿ ೩೨ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ನಮ್ಮ ರಾಜ್ಯದಲ್ಲೂ ಎರಡು ನಕಲಿ ವಿಶ್ವವಿದ್ಯಾಲಯ ಪತ್ತೆಯಾಗಿವೆ. ಈ ನಕಲಿ ವಿಶ್ವವಿದ್ಯಾಲಯಗಳ ಪೈಕಿ ದೆಹಲಿ ೧ನೇ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ಇಂತಹ ವಿಶ್ವವಿದ್ಯಾಲಯಗಳಲ್ಲಿ ದಾಖಲಾದ ನಂತರ ಪಡೆದ ಪದವಿಗಳು ನಿಷ್ಪ್ರಯೋಜಕವಾಗುತ್ತವೆ ಎಂದು ಯುಜಿಸಿ ಸ್ಪಷ್ಟವಾಗಿ ಎಚ್ಚರಿಸಿದೆ. ಜೊತೆಗೆ ಈ ವಿಶ್ವವಿದ್ಯಾಲಯಗಳಿಂದ ಪದವಿಗಳನ್ನು ಉದ್ಯೋಗಕ್ಕಾಗಿ ಮಾನ್ಯತೆ ನೀಡಬಾರದು ಎಂದಿದೆ. ಕೇಂದ್ರ ಸರ್ಕಾರವು ನಿರಂತರವಾಗಿ ನಕಲಿ ವಿಶ್ವವಿದ್ಯಾಲಯಗಳ...

Post
ಪುದೀನಾ ಸೊಂಪಾಗಿ ಬೆಳೆಯಬೇಕೇ?

ಪುದೀನಾ ಸೊಂಪಾಗಿ ಬೆಳೆಯಬೇಕೇ?

ಪುದೀನಾ ಸಾಮಾನ್ಯವಾಗಿ ಸೂರ್ಯನ ಬೆಳಕನ್ನು ಇಷ್ಟಪಡುವ ಗಿಡ. ಆದರೆ ಬೇಸಿಗೆಯ ತೀವ್ರ ಬಿಸಿಲು ಇದಕ್ಕೆ ಮಾರಕವಾಗಬಹುದು. ಸರಿಯಾದ ಗೊಬ್ಬರ, ನೀರು ಮತ್ತು ಬಿಸಿಲಿನ ನಿರ್ವಹಣೆ ಮಾಡಿದರೆ ನಿಮ್ಮ ಮನೆಯ ಪುದೀನಾ ಗಿಡವು ವರ್ಷಪೂರ್ತಿ ತಾಜಾ ಎಲೆಗಳನ್ನು ನೀಡುತ್ತದೆ. ಮೇ ಮತ್ತು ಜೂನ್ ತಿಂಗಳಲ್ಲಿ ತಾಪಮಾನ ೪೦-೪೫ ಡಿಗ್ರಿ ತಲುಪಿದಾಗ, ಪುದೀನಾ ಗಿಡವನ್ನು ದಿನವಿಡೀ ಬಿಸಿಲಿನಲ್ಲಿ ಬಿಡಬೇಡಿ. ಬೆಳಗಿನ ೩-೪ ಗಂಟೆಗಳ ಕಾಲ ಮಾತ್ರ ಹಗುರವಾದ ಬಿಸಿಲು ತಗುಲುವಂತೆ ನೋಡಿಕೊಳ್ಳಿ. ಅತಿಯಾದ ಬಿಸಿಲು ಎಲೆಗಳನ್ನು ಸುಡುತ್ತದೆ ಮತ್ತು ಅವುಗಳ...

Post
ಕುಂಭಮೇಳ ಮೊನಾಲಿಸಾ ಕಣ್ಣೀರು

ಕುಂಭಮೇಳ ಮೊನಾಲಿಸಾ ಕಣ್ಣೀರು

ಕುಂಭಮೇಳದಲ್ಲಿ ‘ರುದ್ರಾಕ್ಷಿ ಲೇಡಿ’ ಎಂದು ವೈರಲ್ ಆಗಿದ್ದ ಮೊನಾಲಿಸಾ, ಮುಸ್ಲಿಂ ಯುವಕ ಫರ್ಮಾನ್ ಖಾನ್ ಅವರನ್ನು ವಿವಾಹವಾಗಿದ್ದು, ಇದು ‘ಲವ್ ಜಿಹಾದ್’ ಚರ್ಚೆಗೆ ಕಾರಣವಾಗಿದೆ. ಜೀವ ಬೆದರಿಕೆ ಎದುರಿಸುತ್ತಿರುವ ದಂಪತಿ ರಕ್ಷಣೆ ಕೋರಿದ್ದಾರೆ. ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಾ ಕಣ್ಣುಗಳಿಂದಲೇ ವೈರಲ್ ಆಗಿ ಇಡೀ ದೇಶದಲ್ಲಿ ಹಲ್‌ಚಲ್ ಸೃಷ್ಟಿಸಿದ್ದ ಮೊನಾಲಿಸಾ  ಇದೀಗ ಮತ್ತೊಮ್ಮೆ ಸದ್ದು ಮಾಡುತ್ತಿದ್ದಾರೆ. ಮುಸ್ಲಿಂ ಯುವಕನನ್ನು ಪ್ರೀತಿಸಿ ಮದುವೆಯಾಗಿರೋ ಮೋನಿ ಬಗ್ಗೆ ಇದಾಗಲೇ ವಾದ-ಪ್ರತಿವಾದ-ವಿವಾದ ಎಲ್ಲವೂ ಶುರುವಾಗಿಬಿಟ್ಟಿದೆ. ಫರ್ಮಾನ್ ಖಾನ್ ಎನ್ನುವ ನಟನನ್ನು ಪ್ರೀತಿಸಿ ಮದುವೆಯಾಗಿರುವ...

Post
ಕಿಮ್ ಪರ ೯೯.೯೩% ಮತ ಬಿದ್ದರೂ ೦.೦೭% ಹೋಗಿದ್ದು ಯಾರಿಗೆ

ಕಿಮ್ ಪರ ೯೯.೯೩% ಮತ ಬಿದ್ದರೂ ೦.೦೭% ಹೋಗಿದ್ದು ಯಾರಿಗೆ

ಉತ್ತರ ಕೊರಿಯಾ ಸಂಸತ್ ಚುನಾವಣೆಯಲ್ಲಿ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ವರ್ಕರ್ಸ್ ಪಾರ್ಟಿ ಆಫ್ ಕೊರಿಯಾ ಮತ್ತು ಮಿತ್ರ ಗುಂಪುಗಳು ೯೯.೯೩% ಮತ ಪಡೆದು  ಭರ್ಜರಿ ಜಯಗಳಿಸಿದ್ದರೂ ೦.೦೭% ಮತ ಹೋಗಿದ್ದು ಯಾರಿಗೆ? –  ವಿಶ್ವಾದ್ಯಂತ ಭಾರೀ ಸದ್ದು ಮಾಡಿದ್ದ ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಮಾರ್ಚ್ ೧೫ ರಂದು ೧೫ ನೇ ಸುಪ್ರೀಂ ಪೀಪಲ್ಸ್ ಅಸೆಂಬಿ ಸದಸ್ಯರನ್ನು ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ಆಡಳಿತ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಪ್ರತಿಯೊಂದು ಸ್ಥಾನವನ್ನು ಗೆದ್ದಿದ್ದಾರೆ...

Post
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ– ನಟಿ ನೋರಾ ಫತೇಹಿ ವಿರುದ್ಧ ಫತ್ವಾ

`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ– ನಟಿ ನೋರಾ ಫತೇಹಿ ವಿರುದ್ಧ ಫತ್ವಾ

ಕೆಡಿ ಸಿನಿಮಾದ ವಿವಾದಿತ `ಸರ್ಸೆ ಸೆರಗ ಸರ್ಸೆ’ ಹಾಡಿಗೆ ನೃತ್ಯ ಮಾಡಿದ್ದಕ್ಕೆ ನೋರಾ ಫತೇಹಿ ವಿರುದ್ಧ ಇಸ್ಲಾಂ ಧರ್ಮದ ಮುಖಂಡರು ಫತ್ವಾ ಹೊರಡಿಸಿದ್ದಾರೆ. ಉತ್ತರ ಪ್ರದೇಶದ ಆಲಿಗಢದ ಮುಸ್ಲಿಂ ದಾರುಲ್ ಇಫ್ತಾದಿಂದ ಮುಖಂಡರು `ಸರ್ಸೆ ಸೆರಗ ಸರ್ಸೆ’ ನೃತ್ಯ ಮಾಡಿದ್ದಕ್ಕೆ ನೋರಾ ಫತೇಹಿ ವಿರುದ್ಧ ಫತ್ವಾ ಜಾರಿ ಮಾಡಿದ್ದಾರೆ. ಈ ಹಾಡು ಆಕ್ಷೇಪಾರ್ಹವಾಗಿದ್ದು, ಇಸ್ಲಾಮಿಕ್ ಬೋಧನೆಗಳಿಗೆ ವಿರುದ್ಧವೆಂದು ಪರಿಗಣಿಸುವ ವಿಷಯಗಳನ್ನು ಹೊಂದಿದೆ. ಹೀಗಾಗಿ ಈ ಹಾಡಿಗೆ ನೃತ್ಯ ಮಾಡಿದ್ದಕ್ಕಾಗಿ ಫತ್ವಾ ಜಾರಿ ಮಾಡಿದೆ. ನಟಿ ನೋರಾ ಫತೇಹಿ...

Post
ಉದ್ಯೋಗ ನೇಮಕಾತಿಗೂ AI ಸಂಕಷ್ಟ

ಉದ್ಯೋಗ ನೇಮಕಾತಿಗೂ AI ಸಂಕಷ್ಟ

ಇಂದಿನ ತಂತ್ರಜ್ಞಾನದ ಯುಗದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಎಐ (AI) ಅಂದರೆ ಕೃತಕ ಬುದ್ಧಿಮತ್ತೆ ಕಂಟಕ ತರಬಹುದು ಎಂಬ ಆತಂಕದ ಜೊತೆಗೆ ಉದ್ಯೋಗಿಗಳ ಕೆಲಸವನ್ನೂ ಕಸಿದುಕೊಳ್ಳಬಹುದೆಂಬ ಭಯ ಈಗಾಗಲೇ ಸೃಷ್ಟಿಯಾಗಿದೆ. ಇದರ ಜೊತೆಗೆ ಎಐನಿಂದ ನೇಮಕಾತಿ ಪ್ರಕ್ರಿಯೆಯೂ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂಬ ಅಭಿಪ್ರಾಯಗಳು ಹರಿದಾಡಿದ್ದು, ಈ ಬಗ್ಗೆ ಬೆಂಗಳೂರು ಮೂಲದ ಟೇಕ್ ಯು ಫಾರ್ವರ್ಡ್ ಸಂಸ್ಥೆಯ ಸಂಸ್ಥಾಪಕ ರಾಜ್ ವಿಕ್ರಮಾದಿತ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.  ಇತ್ತೀಚೆಗೆ ಯೂಸರ್ ಎಕ್ಸ್ಪೀರಿಯನ್ಸ್ ಹುದ್ದೆಗೆ ನಡೆದ ನೇಮಕಾತಿ ಪ್ರಕ್ರಿಯೆಯನ್ನು...

Post
KGF ನಂತಹ ಅದ್ಭುತ ಸ್ಕ್ರಿಪ್ಟ್‌ಗಾಗಿ ಕಾಯುತ್ತಿದ್ದೇನೆ: ಕೊರಿಯನ್ ಸ್ಟಾರ್

KGF ನಂತಹ ಅದ್ಭುತ ಸ್ಕ್ರಿಪ್ಟ್‌ಗಾಗಿ ಕಾಯುತ್ತಿದ್ದೇನೆ: ಕೊರಿಯನ್ ಸ್ಟಾರ್

ಇತ್ತೀಚೆಗೆ ಭಾರತೀಯ ಚಿತ್ರರಂಗವನ್ನು ಉದ್ದೇಶಿಸಿ ಮಾತನಾಡಿದ ಕೊರಿಯನ್ ಸ್ಟಾರ್ ನಟ ವೈ ಹಾ ಜೂನ್, ಯಶ್ ಮತ್ತು ಕೆಜಿಎಫ್ ಗುಣಗಾನ ಮಾಡಿದ್ದಾರೆ. ‘ಅಣ್ತಮ್ಮಾ, ಇಲ್ಲಿ ಯಾರೂ ಹೀರೋಗಳನ್ನು ಹುಟ್ಟಾಕಲ್ಲ, ನಮಗೆ ನಾವೇ ಹೀರೋ ಆಗಬೇಕು’ ಅಂತಾ ರಾಜಾಹುಲಿ ಸಿನಿಮಾದಲ್ಲಿ ಡೈಲಾಗ್ ಹೊಡೆದಿದ್ದ ಯಶ್ ಅವರೀಗ ಕೇವಲ ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಮಾತ್ರವಲ್ಲ, ಇಂಟರ್‌ನ್ಯಾಷನಲ್ ಸೂಪರ್ ಸ್ಟಾರ್. ಏಕೆಂದರೆ, ಯಶ್ ಮತ್ತು ಕೆಜಿಎಫ್ ಪ್ಯಾನ್ ವರ್ಲ್ಡ್ ಲೆವೆಲ್‌ನಲ್ಲಿ ಸದ್ದಾದ ಹೆಸರುಗಳು. ಪ್ರೇಕ್ಷಕರು ಮಾತ್ರವಲ್ಲದೇ ಈಗಾಗಲೇ ಭಾರತೀಯ ಸಿನಿಮಾ ದಿಗ್ಗಜರಿಂದಲೂ...

Post
ಏ. ೨ರಂದು ಹನುಮ ಜನ್ಮೋತ್ಸವ

ಏ. ೨ರಂದು ಹನುಮ ಜನ್ಮೋತ್ಸವ

-ಗುರುರಾಜ ಮ. ದೇಶಕುಲಕರ್ಣಿ ಅಚಲ ಭಕ್ತಿ, ಶಕ್ತಿಗೆ ಹೆಸರು ಹನುಮಂತ ರಾಮನ ಮೇಲಿಟ್ಟ ಭಕ್ತಿ, ಲಂಕೆಗೆ ಏಕಾಂಗಿಯ ಹೋಗಿ ಲಂಕಾದಹನ ಮಾಡಿದ ಪರಾಕ್ರಮಿ, ಗಟ್ಟಿ ಮುಟ್ಟಾದ ದೇಹವನ್ನು ಹೊಂದಿರುವ ಆಂಜನೇಯನ ಜನ್ಮವನ್ನು ಸ್ಮರಿಸಲು ಆಚರಿಸಲಾಗುವ ಹಬ್ಬವೇ ಹನುಮ ಜನ್ಮೋತ್ಸವ. ಹನುಮಂತನ ಜನನ: ಒಂದು ದಿನ ಪಾರ್ವತಿ, ಪರಮೇಶ್ವರರು ಕೈಲಾಸ ಪರ್ವತದಲ್ಲಿದ್ದಾಗ ಒಂದು ವಾನರಯುಗ್ಮವನ್ನು ಕಂಡರು. ಪಾರ್ವತಿ ಶಿವನೊಂದಿಗೆ ಕಲೆತು ಗರ್ಭವನ್ನು ಧರಿಸಿ ಅದನ್ನು ತಾಳಲಾರದೇ ಶಿವನಲ್ಲಿ ಮನವಿ ಮಾಡಿದಾಗ ಶಿವ ಆ ಗರ್ಭವನ್ನು ಪಾರ್ವತಿಯ ನಾಭಿಯಿಂದ ಹೊರಬೀಳುವಂತೆ...

Post
ಜಗತ್ತಿನಾದ್ಯಂತ ಬಳಕೆಯಲ್ಲಿರುವ ವಿವಿಧ ಕ್ಯಾಲೆಂಡರ್‌ಗಳು

ಜಗತ್ತಿನಾದ್ಯಂತ ಬಳಕೆಯಲ್ಲಿರುವ ವಿವಿಧ ಕ್ಯಾಲೆಂಡರ್‌ಗಳು

ಕ್ಯಾಲೆಂಡರ್‌ಗಳು ಕೇವಲ ದಿನಾಂಕ ಪಟ್ಟಿಗಳಲ್ಲ; ಅವು ಧರ್ಮ, ನಂಬಿಕೆಗಳು, ಹಬ್ಬಗಳು ಮತ್ತು ಸೂರ್ಯ-ಚಂದ್ರರ ಚಲನೆಯನ್ನು ಆಧರಿಸಿದ ವಿಜ್ಞಾನದ ಪ್ರತಿಬಿಂಬಗಳಾಗಿವೆ. ಜಗತ್ತಿನ ೪೦ಕ್ಕೂ ಹೆಚ್ಚು ಕ್ಯಾಲೆಂಡರ್‌ಗಳಲ್ಲಿ ೧೧ ಪ್ರಮುಖವಾಗಿವೆ. ಹಿಂದೂ ಪಂಚಾoಗ, ಗ್ರೆಗೋರಿಯನ್, ಹಿಜ್ರಿ, ಚೈನೀಸ್, ಹೀಬ್ರೂ ಮತ್ತು ಬೌದ್ಧ ಕ್ಯಾಲೆಂಡರ್‌ಗಳು ವಿಭಿನ್ನವಾಗಿ ಕಾಲವನ್ನು ಅಳೆಯುವ ವಿಧಾನಗಳನ್ನು ಹೊಂದಿದೆ. ಕ್ಯಾಲೆಂಡರ್‌ಗಳು ಕೇವಲ ದಿನ, ತಿಂಗಳು ಮತ್ತು ವರ್ಷವನ್ನು ತಿಳಿಸುವ ಸಾಧನಗಳಲ್ಲ; ಅವು ಆಯಾ ಧರ್ಮದ ನಂಬಿಕೆಗಳು, ಹಬ್ಬಗಳು, ಶುಭ-ಅಶುಭ ಮುಹೂರ್ತಗಳು ಮತ್ತು ಸೂರ್ಯ-ಚಂದ್ರರ ಚಲನೆಯನ್ನು ಆಧರಿಸಿದ ವಿಜ್ಞಾನದ ಪ್ರತಿಬಿಂಬಗಳಾಗಿವೆ....